ಮೈಸೂರು: ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕಾಗಿ ₹ 7.60 ಕೋಟಿ ಮೊತ್ತದ ಮರು ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
‘ಚಿನ್ನದ ಬಳಕೆ ಸಂಬಂಧ ಮರು ಪ್ರಸ್ತಾವ ಸಲ್ಲಿಸಿದರೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಕೂಡಲೇ, ಈ ಕುರಿತು ಕ್ರಮ ವಹಿಸಬೇಕು’ ಎಂದರು.