<p><strong>ಮೈಸೂರು: </strong>ದೊರೆಸ್ವಾಮಿ ಅವರು ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಟೀಕಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಮಂಡಿಸಲಾಗಿದೆ.</p>.<p><strong>ಇದನ್ನೂ ಓದಿ:<a href="https://cms.prajavani.net/stories/stateregional/bjp-mla-basanagouda-patil-yatnal-calls-doreswamy-fake-freedom-fighter-708098.html" itemprop="url" target="_blank">ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ: ಬಸನಗೌಡ ಪಾಟೀಲ ಯತ್ನಾಳ </a></strong></p>.<p>ಕಾಂಗ್ರೆಸ್–ಜೆಡಿಎಸ್ ಆಡಳಿತವಿರುವ ಪಾಲಿಕೆಯಲ್ಲಿ ಮಂಡನೆಯಾದ ಈ ನಿರ್ಣಯವನ್ನು ಬಿಜೆಪಿ ವಿರೋಧಿಸಿದೆ. ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.</p>.<p>ಸ್ವಾತಂತ್ರ್ಯ ಹೋರಾಟಗಾರ ವಿರುದ್ಧ ನೀಡಲಾದ ಹೇಳಿಕೆ ಕುರಿತು ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಸದಸ್ಯ ಅಯೂಬ್ ಖಾನ್ ಆಗ್ರಹಿಸಿದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದರ ಬಿಜೆಪಿ ಸದಸ್ಯರು ಇದು ಚರ್ಚೆಯ ವೇದಿಕೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.</p>.<p>ಅದರೆ, ಯತ್ನಾಳ್ ಅವರ ಹೇಳಿಕೆ ದೇಶದ ವಿಚಾರ, ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿದ್ದು ಚರ್ಚೆಯಾಗಲೇಬೇಕು ಎಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು.</p>.<p>ನಡಾವಳಿಯಂತೆ ಚರ್ಚೆ ನಡೆಸಲು ಮೇಯರ್ ತಸ್ನಿಂ ರೂಲಿಂಗ್ ಹೊರಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದೊರೆಸ್ವಾಮಿ ಅವರು ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಟೀಕಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಮಂಡಿಸಲಾಗಿದೆ.</p>.<p><strong>ಇದನ್ನೂ ಓದಿ:<a href="https://cms.prajavani.net/stories/stateregional/bjp-mla-basanagouda-patil-yatnal-calls-doreswamy-fake-freedom-fighter-708098.html" itemprop="url" target="_blank">ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ: ಬಸನಗೌಡ ಪಾಟೀಲ ಯತ್ನಾಳ </a></strong></p>.<p>ಕಾಂಗ್ರೆಸ್–ಜೆಡಿಎಸ್ ಆಡಳಿತವಿರುವ ಪಾಲಿಕೆಯಲ್ಲಿ ಮಂಡನೆಯಾದ ಈ ನಿರ್ಣಯವನ್ನು ಬಿಜೆಪಿ ವಿರೋಧಿಸಿದೆ. ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.</p>.<p>ಸ್ವಾತಂತ್ರ್ಯ ಹೋರಾಟಗಾರ ವಿರುದ್ಧ ನೀಡಲಾದ ಹೇಳಿಕೆ ಕುರಿತು ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಸದಸ್ಯ ಅಯೂಬ್ ಖಾನ್ ಆಗ್ರಹಿಸಿದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದರ ಬಿಜೆಪಿ ಸದಸ್ಯರು ಇದು ಚರ್ಚೆಯ ವೇದಿಕೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.</p>.<p>ಅದರೆ, ಯತ್ನಾಳ್ ಅವರ ಹೇಳಿಕೆ ದೇಶದ ವಿಚಾರ, ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿದ್ದು ಚರ್ಚೆಯಾಗಲೇಬೇಕು ಎಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು.</p>.<p>ನಡಾವಳಿಯಂತೆ ಚರ್ಚೆ ನಡೆಸಲು ಮೇಯರ್ ತಸ್ನಿಂ ರೂಲಿಂಗ್ ಹೊರಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>