ಈ ನೂತನ ಮಾರ್ಗ ನಿರ್ಮಾಣವಾದರೆ ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಲಭಿಸಿದಂತಾಗಲಿದೆ. ಇದರಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಜೊತೆಗೆ ಈ ಭಾಗದ ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗೂ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ವಿವಿಧೆಡೆಯಿಂದ ಕೊಡಗು ಜಿಲ್ಲೆಗೆ ಬರುತ್ತಾರೆ.