ನೆರೆಯ ಜಿಲ್ಲೆಗಳಾದ ಮಂಡ್ಯ, ಹಾಸನಕ್ಕೆ ಹೋಲಿಸಿದರೆ ಮೈಸೂರಿನಲ್ಲಿ ಪ್ರಚಾರ ತಡವಾಗಿ ಕಾವು ಪಡೆದುಕೊಂಡಿತ್ತು. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಪ್ರಚಾರದ ಭರಾಟೆ ಹೆಚ್ಚಿಸಿದ್ದರು. ಬಿಎಸ್ಪಿ ನಾಯಕಿ ಮಾಯಾವತಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್–ಕಾಂಗ್ರೆಸ್ ಜಂಟಿ ಸಮಾವೇಶ ಆಯೋಜಿಸಲಾಗಿತ್ತು. ಉಭಯ ಪಕ್ಷಗಳ ಮುಖಂಡರು ಒಗ್ಗಟ್ಟು ಪ್ರದರ್ಶಿಸಿದ್ದರು.