‘ಬೆಳಗಾವಿ, ಬಳ್ಳಾರಿ, ಹುಬ್ಬಳ್ಳಿ, ವಿಜಯಪುರ, ಧಾರವಾಡ, ಹೊಸಪೇಟೆ, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್, ಬಂಗಾರಪೇಟೆ, ಕೆಂಗೇರಿ, ಕೆ.ಆರ್.ಪುರ, ಮೈಸೂರು, ದಾವಣಗೆರೆ, ಶಿವಮೊಗ್ಗ ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್ಗಳು ಕಾರ್ಯಾರಂಭಗೊಂಡಿವೆ’ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.