ದಾವಣಗೆರೆಯಲ್ಲಿ ಭಾನುವಾರ ನಡೆದ ರೋಟರಿ 36ನೇ ಜಿಲ್ಲಾ ಸಮ್ಮೇಳನದಲ್ಲಿ ಅವರು ಮಾತನಾಡಿ, ಶಾಸಕರಾಗಿ ಆಯ್ಕೆಯಾದ ವ್ಯಕ್ತಿಗೆ ಉಪ ಮುಖ್ಯಮಂತ್ರಿ ಆಗುವಾಸೆ. ಡಿಸಿಎಂ ಇದ್ದವರು ಸಿಎಂ ಆಗಲು ಬಯಸುತ್ತಾರೆ. ಹಾಗಾಗಿಯೇ ಈ ಬಾರಿ ರಾಜ್ಯದಲ್ಲಿ ಮೂವರು ಡಿಸಿಎಂಗಳನ್ನು ನೋಡುತ್ತಿದ್ದೇವೆ. ಮುಂದೊಂದು ದಿನ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಹೀಗೆ ಜಿಲ್ಲೆಗೊಬ್ಬರನ್ನು ಮುಖ್ಯಮಂತ್ರಿ ಮಾಡಿ ಎಂದು ಒತ್ತಡ ಹೇರುವ ದಿನಗಳೂ ಬರಬಹುದು ಎಂದರು.