ಬೆಂಗಳೂರು:ಈಗಾಗಲೇ ವಿವಿಧ ನಿಗಮ, ಮಂಡಳಿ, ಅಕಾಡೆಮಿಗಳ ನಾಮನಿರ್ದೇಶನಗಳನ್ನು ರದ್ದು ಮಾಡಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ, ಈಗ ನಗರ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದು ಮಾಡಿದೆ.
ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಹಿಂದಿನ ಸರ್ಕಾರ ನೇಮಕ ಮಾಡಿದ್ದ ನಾಮ ನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದುಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.