ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕ ಜೆ.ಎನ್. ಗಣೇಶ್ ವಿರುದ್ಧ ಎಫ್.ಐ.ಆರ್. ದಾಖಲಾಗುವವರೆಗೆ ನಮ್ಮ ಜತೆ ಇದ್ದರು. ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ. ಅಧಿವೇಶನದಲ್ಲಿ ಜಿಲ್ಲೆಯ ಯಾವ ಶಾಸಕರು ಭಾಗವಹಿಸುವರು, ಭಾಗವಹಿಸುವುದಿಲ್ಲ ಎನ್ನುವುದು ಫೆ. 6ರಂದು ಗೊತ್ತಾಗಲಿದೆ’ ಎಂದು ಪ್ರತಿಕ್ರಿಯಿಸಿದರು.