ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡುವುದಾಗಿ ಅಬಕಾರಿ ಸಚಿವ ಎಚ್.ನಾಗೇಶ್ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಕಾರಣದಿಂದ, ಈ ನಿರ್ಧಾರದಿಂದ ಅವರು ಹಿಂದೆ ಸರಿದಿದ್ದಾರೆ.
‘ಹೆಣ್ಣು ಮಕ್ಕಳಿಗೆ ನೋವಾಗಬಾರದು ಎಂಬ ಕಾರಣಕ್ಕೆ ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡುವುದಿಲ್ಲ. ಮಹಿಳೆ ಯರಿಗೆ ಗೌರವ ಕೊಡಬೇಕು ಎಂಬ ಕಾರಣಕ್ಕೆ ಕ್ಷಮೆ ಕೋರುವುದಾಗಿ’ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ತಾಂಡಾಗಳಲ್ಲಿ ಸಂಚಾರಿ ಮದ್ಯ ಮಾರಾಟ ಮಳಿಗೆ ಆರಂಭಿಸಲ್ಲ’ ಎಂದರು. ರಾಜ್ಯದಲ್ಲಿ ಪಾನ ನಿಷೇಧಕ್ಕೆ ಆಗ್ರಹಿಸಿ ಜಾಥಾ ನಡೆಸಿದ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೂ ಕ್ಷಮೆ ಕೋರಿದರು.