<p><strong>ಬೆಂಗಳೂರು:</strong>₹ 20 ಕೋಟಿ ಡೀಲ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣವನ್ನು ಬಿಗಿಗೊಳಿಸುವಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.</p>.<p>ಕುಮಾರಸ್ವಾಮಿ ಅವರ ಜತೆಗಿನ ಮಾತುಕತೆ ಸಂದರ್ಭದಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>‘ಇಲ್ಲಿ ಜನಾರ್ದನ ರೆಡ್ಡಿಯನ್ನು ಬಿಗಿ ಮಾಡಿದರೆ ಆಂಧ್ರದಲ್ಲಿ ವೈಆರ್ಎಸ್ ಕಾಂಗ್ರೆಸ್ನ ಜಗನ್ಮೋಹನ್ ರೆಡ್ಡಿ ಕಟ್ಟಿ ಹಾಕಬಹುದು. ರೆಡ್ಡಿ ಮತ್ತು ಜಗನ್ ಒಳ ವ್ಯವಹಾರಗಳನ್ನೂ ಮಟ್ಟ ಹಾಕಬಹುದು’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ.ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>₹ 20 ಕೋಟಿ ಡೀಲ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣವನ್ನು ಬಿಗಿಗೊಳಿಸುವಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.</p>.<p>ಕುಮಾರಸ್ವಾಮಿ ಅವರ ಜತೆಗಿನ ಮಾತುಕತೆ ಸಂದರ್ಭದಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>‘ಇಲ್ಲಿ ಜನಾರ್ದನ ರೆಡ್ಡಿಯನ್ನು ಬಿಗಿ ಮಾಡಿದರೆ ಆಂಧ್ರದಲ್ಲಿ ವೈಆರ್ಎಸ್ ಕಾಂಗ್ರೆಸ್ನ ಜಗನ್ಮೋಹನ್ ರೆಡ್ಡಿ ಕಟ್ಟಿ ಹಾಕಬಹುದು. ರೆಡ್ಡಿ ಮತ್ತು ಜಗನ್ ಒಳ ವ್ಯವಹಾರಗಳನ್ನೂ ಮಟ್ಟ ಹಾಕಬಹುದು’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ.ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>