ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ.ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.