ಬಿಜೆಪಿ ಕಾರ್ಯಕರ್ತರು ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ರಾಜ್ಯದಲ್ಲೀಗ ಹೀರೊ ಸರ್ಕಾರವಿದೆ. ಬಿ.ಎಸ್.ಯಡಿಯೂರಪ್ಪ ನಿಜವಾದ ಹೀರೊ. ನೆರೆ ಸಂತ್ರಸ್ತರ ಕಣ್ಣೀರು ಒರೆಸಿದ ಏಕೈಕ ಮುಖ್ಯಮಂತ್ರಿ. ರಾಜ್ಯದ ಜನರು ಕೇಳಿದ್ದನ್ನು ಕೊಡುವ ಕಾಮಧೇನು’ ಎಂದು ವ್ಯಾಖ್ಯಾನಿಸಿದರು.