ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಲ್ಲಿ ಚಿನ್ನ ತೆಗೆಯಲು ಹೊರಟ ಸಿದ್ದರಾಮಯ್ಯ: ನಳಿನ್‌ಕುಮಾರ್‌ ಟೀಕೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
Last Updated 7 ಮೇ 2020, 20:20 IST
ಅಕ್ಷರ ಗಾತ್ರ

ಮಂಗಳೂರು: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆಯುವ ಹೇಳಿಕೆ ನೀಡಿದಂತೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ಟೀಕಿಸಿದ್ದಾರೆ.

‘ಒಬ್ಬ ರೈತ ಎಲ್ಲಿ ಎಕರೆಗೆ ₹ 50 ಲಕ್ಷ ಖರ್ಚು ಮಾಡಿದ್ದಾನೆ ಎಂಬ ಬಗ್ಗೆ ಸಿದ್ದರಾಮಯ್ಯ ಅಧ್ಯಯನ ಮಾಡಬೇಕು. ಎಲ್ಲವನ್ನೂ ತಿಳಿದು ಮಾತನಾಡಲಿ. ಈಗಿನ ಸ್ಥಿತಿಯಲ್ಲಿ ಕಾಂಗ್ರೆಸ್ ರಾಜಕಾರಣ ಬಿಟ್ಟು, ಜನರ ಕಣ್ಣೀರು ಒರೆಸುವ ಕೆಲಸಕ್ಕೆ ಮುಂದಾಗಬೇಕು‘ ಎಂದಿದ್ದಾರೆ.

‘ಮುಖ್ಯಮಂತ್ರಿ, ಹಣಕಾಸು ಸಚಿವರಾಗಿ ಕೆಲಸ ಮಾಡಿರುವ ಅವರಿಗೆ ಹೂವು ಬೆಳೆಯಲು ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲ‘ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT