ಬೆಂಗಳೂರು: ಯಡಿಯೂರಪ್ಪ ಅವರೊಂದಿಗೆ ಕೆಲ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್, ಸಂಧಾನದ ಬಳಿಕ ಯಡಿಯೂರಪ್ಪ ಅವರನ್ನು ಹೊಗಳಲಾರಂಭಿಸಿದ್ದಾರೆ. ನೆರೆ ಪರಿಹಾರ ವಿಚಾರದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಂತ್ರಸ್ತರ ಖಾತೆಗಳಿಗೇ ನೇರ ಪರಿಹಾರ ಸಂದಾಯವಾಗುವಂತೆ ಮಾಡಿ ಮಾದರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೊಂಡಾಡಿದರು.