ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು. ಇಬ್ಬರ ನಡುವೆ ಮನಸ್ತಾಪ ಇದೆ ಎಂಬ ವದಂತಿಗಳ ಹಿನ್ನೆಲೆ ಯಲ್ಲಿ ಈ ಭೇಟಿಗೆ ಮಹತ್ವ ದೊರೆತಿದೆ.
ಬಿಬಿಎಂಪಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ಉಭಯ ನಾಯಕರಲ್ಲಿ ಮನಸ್ತಾಪ ಏರ್ಪಟ್ಟಿದೆ ಎನ್ನಲಾಗಿತ್ತು. ಬಹಿರಂಗ ಹೇಳಿಕೆಗಳ ಮೂಲಕವೂ ಅದು ಸಾಬೀತಾಗಿತ್ತು.