ನಂತರ, ಇವರು ಮತ್ತು ಆಯೋಜಕರ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಜಿಲ್ಲಾ ವಕೀಲರ ಸಂಘವು ಇವರ ಪರ ವಕಾಲತ್ತು ವಹಿಸಬಾರದು ಎಂದು ನಿರ್ಣಯ ಕೈಗೊಂಡಿತು. ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಮಂಗಳವಾರ ನ್ಯಾಯಾಲಯದಲ್ಲಿ ಪೊಲೀಸರು ಆಕ್ಷೇಪ ಸಲ್ಲಿಸಬೇಕಿತ್ತು. ಈ ವೇಳೆ ಅವರು ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರತ್ತ ಕಿಡಿಕಾರಿದ್ದರು. ‘ನೋ ಹ್ಯುಮಾನಿಟಿ’ ಎಂದು ಘೋಷಣೆ ಕೂಗಿದ್ದರು.