<p><strong>ಹುಬ್ಬಳ್ಳಿ</strong>:ಏಷ್ಯಾ, ಯುರೋಪ್, ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಖಂಡಗಳಲ್ಲಿರುವ ಅತಿ ಎತ್ತರದ ಶಿಖರಗಳ ತುತ್ತತುದಿಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿರುವ ಹುಬ್ಬಳ್ಳಿಯ ಸಾಹಸಿ ಯುವತಿ ನಂದಿತಾ ನಾಗನಗೌಡರ (31) ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.</p>.<p>‘ನನ್ನನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ. ಪ್ರಪಂಚದ ಏಳು ಖಂಡಗಳ ಪೈಕಿ ಈಗಾಗಲೇ ನಾಲ್ಕು ಖಂಡಗಳ ಅತಿ ಎತ್ತರದ ಶಿಖರಗಳನ್ನು ವೈಯಕ್ತಿಕ ಖರ್ಚಿನಲ್ಲಿ (ಮೌಂಟ್ ಎವರೆಸ್ಟ್, ಕಿಲಿಮಂಜಾರೊ, ಕಾರ್ಸನ್ಸ್ ಪಿರಾಮಿಡ್) ಏರಿದ್ದೇನೆ. ಸರ್ಕಾರ ಇನ್ನಷ್ಟು ನೆರವು, ಪ್ರೋತ್ಸಾಹ ನೀಡಿದರೆ ಇನ್ನುಳಿದ ಮೂರು ಖಂಡಗಳ ಶಿಖರಗಳ ಮೇಲೆ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುತ್ತೇನೆ’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಶಿಖರಾರೋಹಣದ ಉದ್ದೇಶ ಕೇವಲ ಸಾಹಸ ಮಾತ್ರವಲ್ಲ. ಇದರ ಹಿಂದೆ ದೇಶ, ದೇಶಗಳ ನಡುವೆ ಹಾಗೂ ಖಂಡ, ಖಂಡಗಳ ನಡುವಿನ ಸೌಹಾರ್ದತೆ ಹಾಗೂ ಮಹಿಳಾ ಸಬಲೀಕರಣದ ಉದ್ದೇಶವಿದೆ’ ಎಂದು ಹೇಳಿದರು.</p>.<p>ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನಿಂದ ಎಂಜಿನಿಯರಿಂಗ್ ಹಾಗೂ ಇಂಗ್ಲೆಂಡ್ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಸದ್ಯ ಇಂಗ್ಲೆಂಡ್ನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>:ಏಷ್ಯಾ, ಯುರೋಪ್, ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಖಂಡಗಳಲ್ಲಿರುವ ಅತಿ ಎತ್ತರದ ಶಿಖರಗಳ ತುತ್ತತುದಿಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿರುವ ಹುಬ್ಬಳ್ಳಿಯ ಸಾಹಸಿ ಯುವತಿ ನಂದಿತಾ ನಾಗನಗೌಡರ (31) ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.</p>.<p>‘ನನ್ನನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ. ಪ್ರಪಂಚದ ಏಳು ಖಂಡಗಳ ಪೈಕಿ ಈಗಾಗಲೇ ನಾಲ್ಕು ಖಂಡಗಳ ಅತಿ ಎತ್ತರದ ಶಿಖರಗಳನ್ನು ವೈಯಕ್ತಿಕ ಖರ್ಚಿನಲ್ಲಿ (ಮೌಂಟ್ ಎವರೆಸ್ಟ್, ಕಿಲಿಮಂಜಾರೊ, ಕಾರ್ಸನ್ಸ್ ಪಿರಾಮಿಡ್) ಏರಿದ್ದೇನೆ. ಸರ್ಕಾರ ಇನ್ನಷ್ಟು ನೆರವು, ಪ್ರೋತ್ಸಾಹ ನೀಡಿದರೆ ಇನ್ನುಳಿದ ಮೂರು ಖಂಡಗಳ ಶಿಖರಗಳ ಮೇಲೆ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುತ್ತೇನೆ’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಶಿಖರಾರೋಹಣದ ಉದ್ದೇಶ ಕೇವಲ ಸಾಹಸ ಮಾತ್ರವಲ್ಲ. ಇದರ ಹಿಂದೆ ದೇಶ, ದೇಶಗಳ ನಡುವೆ ಹಾಗೂ ಖಂಡ, ಖಂಡಗಳ ನಡುವಿನ ಸೌಹಾರ್ದತೆ ಹಾಗೂ ಮಹಿಳಾ ಸಬಲೀಕರಣದ ಉದ್ದೇಶವಿದೆ’ ಎಂದು ಹೇಳಿದರು.</p>.<p>ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನಿಂದ ಎಂಜಿನಿಯರಿಂಗ್ ಹಾಗೂ ಇಂಗ್ಲೆಂಡ್ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಸದ್ಯ ಇಂಗ್ಲೆಂಡ್ನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>