ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗದ ಅನುದಾನ: ಕಾಂಗ್ರೆಸ್‌ ಶಾಸಕರ ಅಸಮಾಧಾನ

Last Updated 12 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ಬೆಳಗಾವಿ: ಅನುದಾನದ ವಿಚಾರದಲ್ಲಿ ಕಾಂಗ್ರೆಸ್‌ ಶಾಸಕರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಇಲ್ಲಿನ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ನಾರಾಯಣಸ್ವಾಮಿ, ‘ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ಸಿಗುತ್ತಿಲ್ಲ’ ಎಂದರು.

‘ಈ ವಿಷಯವನ್ನು ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಯೋಜನವಾಗಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕಷ್ಟವಾಗಲಿದೆ’ ಎಂದರು.

‘ಕೋಲಾರ ಜಿಲ್ಲೆಯಿಂದ ನಾವು ಐವರು ಶಾಸಕರಿದ್ದೇವೆ. ಜಿಲ್ಲೆಗೆ ಸಚಿವ ಸ್ಥಾನವನ್ನೇ ಕೊಟ್ಟಿಲ್ಲ. ನಾನು ಹಿರಿಯನಿದ್ದೇನೆ. ಸಚಿವ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT