<p><strong>ಬೆಂಗಳೂರು: </strong>ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.</p>.<p>ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿರುವ ಅವರು, ನರೇಗಾ ಯೋಜನೆಗೆ ಕೇಂದ್ರದಿಂದ 1,861 ಕೋಟಿ ರೂ ಹಣ ಬಿಡುಗಡೆ ಆಗಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ 1,039 ಕೋಟಿ ರೂ ಬಾಕಿ ಹಣ ಕೊಡಬೇಕಿದೆ. ರಾಜ್ಯ ಸರ್ಕಾರದಿಂದಲೂ ₹257 ಕೋಟಿ ಅನುದಾನ ಬಿಡುಗಡೆಯಾಗಿದೆ,’ ಎಂದು ತಿಳಿಸಿದರು.</p>.<p>ಕೊರೋನಾ ವೈರಸ್ನಿಂದಾದ ಪರಿಣಾಮಗಳಿಂದಾಗಿ ನರೇಗಾ ಕೂಲಿ ಹಣದಲ್ಲಿ ಹೆಚ್ಚಳ ಆಗಿದೆ. ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ. ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಕೂಲಿ ಕಾರ್ಮಿಕರಿಗೆ ಇದು ನೆರವಾಗಲಿದೆ. ಇನ್ನುಮುಂದೆ ನರೇಗಾ ಕಾಮಗಾರಿಗಳು ಚುರುಕಾಗಲಿವೆ ಎಂದು ಈಶ್ವರಪ್ಪ ತಿಳಿಸಿದರು.</p>.<p>ಹಿಂದೆ ಕೆಲವರಿಗೆ ಕೂಲಿ ಮತ್ತು ಸಲಕರಣೆಗಳ ಬಿಲ್ ಬಾಕಿ ಇತ್ತು. ಎಲ್ಲವನ್ನೂ ಪಾವತಿಸಿದ ಬಳಿಕ 1077 ಬಾಕಿ ಹಣ ಉಳಿಯಲಿದೆ. ಮುಂದಿನ ದಿನಗಳಲ್ಲಿ ಉಳಿಕೆ ನರೇಗಾ ಹಣದ ಬಳಕೆ ಮಾಡಿಕೊಳ್ಳುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.</p>.<p>ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿರುವ ಅವರು, ನರೇಗಾ ಯೋಜನೆಗೆ ಕೇಂದ್ರದಿಂದ 1,861 ಕೋಟಿ ರೂ ಹಣ ಬಿಡುಗಡೆ ಆಗಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ 1,039 ಕೋಟಿ ರೂ ಬಾಕಿ ಹಣ ಕೊಡಬೇಕಿದೆ. ರಾಜ್ಯ ಸರ್ಕಾರದಿಂದಲೂ ₹257 ಕೋಟಿ ಅನುದಾನ ಬಿಡುಗಡೆಯಾಗಿದೆ,’ ಎಂದು ತಿಳಿಸಿದರು.</p>.<p>ಕೊರೋನಾ ವೈರಸ್ನಿಂದಾದ ಪರಿಣಾಮಗಳಿಂದಾಗಿ ನರೇಗಾ ಕೂಲಿ ಹಣದಲ್ಲಿ ಹೆಚ್ಚಳ ಆಗಿದೆ. ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ. ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಕೂಲಿ ಕಾರ್ಮಿಕರಿಗೆ ಇದು ನೆರವಾಗಲಿದೆ. ಇನ್ನುಮುಂದೆ ನರೇಗಾ ಕಾಮಗಾರಿಗಳು ಚುರುಕಾಗಲಿವೆ ಎಂದು ಈಶ್ವರಪ್ಪ ತಿಳಿಸಿದರು.</p>.<p>ಹಿಂದೆ ಕೆಲವರಿಗೆ ಕೂಲಿ ಮತ್ತು ಸಲಕರಣೆಗಳ ಬಿಲ್ ಬಾಕಿ ಇತ್ತು. ಎಲ್ಲವನ್ನೂ ಪಾವತಿಸಿದ ಬಳಿಕ 1077 ಬಾಕಿ ಹಣ ಉಳಿಯಲಿದೆ. ಮುಂದಿನ ದಿನಗಳಲ್ಲಿ ಉಳಿಕೆ ನರೇಗಾ ಹಣದ ಬಳಕೆ ಮಾಡಿಕೊಳ್ಳುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>