<p><strong>ಮೈಸೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಕೇಂದ್ರ ಸರ್ಕಾರದಿಂದ ₹ 1,800 ಕೋಟಿ ಬಾಕಿ ಬಿಡುಗಡೆ ಆಗಿಲ್ಲ. 2016ರಿಂದ ಬಾಕಿ ಹಣ ನೀಡಬೇಕಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.</p>.<p>ಮೈಸೂರಿನಲ್ಲಿ ಬುಧವಾರ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>2015–16ರಲ್ಲಿ ರಾಜ್ಯದಲ್ಲಿ ಬರಗಾಲವಿತ್ತು. ಕೇಂದ್ರ ಸರ್ಕಾರ 6 ತಿಂಗಳು ಅನುದಾನ ನೀಡಿರಲಿಲ್ಲ. ಹಣ ಪಾವತಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕೇಂದ್ರದ ಅನುಮತಿ ಪಡೆದು ರಾಜ್ಯ ಸರ್ಕಾರ ₹ 2,175 ಕೋಟಿ ಬಿಡುಗಡೆ ಮಾಡಿತ್ತು. ಈ ಮೊತ್ತದಲ್ಲಿ ಕೇಂದ್ರ ₹ 935 ಕೋಟಿಯನ್ನು ಇನ್ನೂ ಮರುಪಾವತಿ ಮಾಡಿಲ್ಲ ಎಂದರು.</p>.<p>ಈ ವರ್ಷದ ಚಾಲ್ತಿ ಬಾಕಿ ಮತ್ತು ಹಿಂದಿನ ವರ್ಷಗಳ ಬಾಕಿ ಸೇರಿದಂತೆ ಒಟ್ಟು ₹ 1,800 ಕೋಟಿಯನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರವು ಕುಡಿಯುವ ನೀರಿನ ಯೋಜನೆಗಳಿಗೆ ನೀಡುವ ಅನುದಾನವನ್ನೂ ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಈ ವರ್ಷ ಕುಡಿಯುವ ನೀರಿನ ಯೋಜನೆಗಳಿಗೆ ₹ 2,600 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಕೇಂದ್ರದ ಪಾಲು ₹1,460 ಕೋಟಿಯಾಗಿದ್ದು, ಇದುವರೆಗೆ ಕೇವಲ ₹ 312 ಕೋಟಿ ಮಾತ್ರ ನೀಡಿದೆ ಎಂದರು.</p>.<p>2018ರ ಮಾರ್ಚ್ ವರೆಗೆ ವಿವಿಧ ಯೋಜನೆಗಳಿಗೆ ₹ 95 ಸಾವಿರ ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ₹ 80 ಸಾವಿರ ಕೋಟಿ ಮಾತ್ರ ನೀಡಿದೆ ಎಂದು ಹೇಳಿದರು.</p>.<p><strong>646 ಗ್ರಾಮಗಳಲ್ಲಿ ನೀರಿನ ಸಮಸ್ಯೆ</strong></p>.<p>ರಾಜ್ಯದಲ್ಲಿ ಒಟ್ಟು 646 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದರಲ್ಲಿ 284 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ 490 ಟ್ಯಾಂಕರ್ಗಳನ್ನು ಬಳಸಲಾಗುತ್ತಿದ್ದು, ಪ್ರತಿದಿನ ಸುಮಾರು 1,376 ಟ್ಯಾಂಕ್ ನೀರು ಸರಬರಾಜು ಆಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>362 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>‘ಶಾಶ್ವತ ಕುಡಿಯುವ ನೀರಿನ ಯೋಜನೆಗಳಿಗಾಗಿ ಈ ವರ್ಷ ಜಿ.ಪಂ.ಗಳಿಗೆ ₹ 2,600 ಕೋಟಿ ಅನುದಾನ ಕೊಟ್ಟಿದ್ದೇವೆ. ಬರ ಘೋಷಣೆಯಾದ ಬಳಿಕ ಹೆಚ್ಚುವರಿಯಾಗಿ ₹ 134 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p><strong>‘ಹಲ್ಲೆಗೆ ವೈಯಕ್ತಿಕ ವಿಚಾರ ಕಾರಣ’</strong></p>.<p>‘ಶಾಸಕರಾದ ಆನಂದ್ ಸಿಂಗ್, ಜೆ.ಎನ್.ಗಣೇಶ್ ಪ್ರಕರಣದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ವೈಯಕ್ತಿಕ ಮತ್ತು ಸ್ಥಳೀಯ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದಿದೆ ಎಂಬುದು ನನಗೆ ದೊರೆತಿರುವ ಮಾಹಿತಿ’ ಎಂದು ಕೃಷ್ಣಭೈರೇಗೌಡ ಹೇಳಿದರು.</p>.<p>ಈ ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪಕ್ಷದಲ್ಲಿ ಒಡಕು ಇಲ್ಲ. ಯಾವುದೇ ಶಾಸಕರನ್ನು ಬಿಟ್ಟುಕೊಡುವಂತಹ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಗಣೇಶ್ ಅವರನ್ನು ಅಮಾನತು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಕೇಂದ್ರ ಸರ್ಕಾರದಿಂದ ₹ 1,800 ಕೋಟಿ ಬಾಕಿ ಬಿಡುಗಡೆ ಆಗಿಲ್ಲ. 2016ರಿಂದ ಬಾಕಿ ಹಣ ನೀಡಬೇಕಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.</p>.<p>ಮೈಸೂರಿನಲ್ಲಿ ಬುಧವಾರ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>2015–16ರಲ್ಲಿ ರಾಜ್ಯದಲ್ಲಿ ಬರಗಾಲವಿತ್ತು. ಕೇಂದ್ರ ಸರ್ಕಾರ 6 ತಿಂಗಳು ಅನುದಾನ ನೀಡಿರಲಿಲ್ಲ. ಹಣ ಪಾವತಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕೇಂದ್ರದ ಅನುಮತಿ ಪಡೆದು ರಾಜ್ಯ ಸರ್ಕಾರ ₹ 2,175 ಕೋಟಿ ಬಿಡುಗಡೆ ಮಾಡಿತ್ತು. ಈ ಮೊತ್ತದಲ್ಲಿ ಕೇಂದ್ರ ₹ 935 ಕೋಟಿಯನ್ನು ಇನ್ನೂ ಮರುಪಾವತಿ ಮಾಡಿಲ್ಲ ಎಂದರು.</p>.<p>ಈ ವರ್ಷದ ಚಾಲ್ತಿ ಬಾಕಿ ಮತ್ತು ಹಿಂದಿನ ವರ್ಷಗಳ ಬಾಕಿ ಸೇರಿದಂತೆ ಒಟ್ಟು ₹ 1,800 ಕೋಟಿಯನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರವು ಕುಡಿಯುವ ನೀರಿನ ಯೋಜನೆಗಳಿಗೆ ನೀಡುವ ಅನುದಾನವನ್ನೂ ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಈ ವರ್ಷ ಕುಡಿಯುವ ನೀರಿನ ಯೋಜನೆಗಳಿಗೆ ₹ 2,600 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಕೇಂದ್ರದ ಪಾಲು ₹1,460 ಕೋಟಿಯಾಗಿದ್ದು, ಇದುವರೆಗೆ ಕೇವಲ ₹ 312 ಕೋಟಿ ಮಾತ್ರ ನೀಡಿದೆ ಎಂದರು.</p>.<p>2018ರ ಮಾರ್ಚ್ ವರೆಗೆ ವಿವಿಧ ಯೋಜನೆಗಳಿಗೆ ₹ 95 ಸಾವಿರ ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ₹ 80 ಸಾವಿರ ಕೋಟಿ ಮಾತ್ರ ನೀಡಿದೆ ಎಂದು ಹೇಳಿದರು.</p>.<p><strong>646 ಗ್ರಾಮಗಳಲ್ಲಿ ನೀರಿನ ಸಮಸ್ಯೆ</strong></p>.<p>ರಾಜ್ಯದಲ್ಲಿ ಒಟ್ಟು 646 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದರಲ್ಲಿ 284 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ 490 ಟ್ಯಾಂಕರ್ಗಳನ್ನು ಬಳಸಲಾಗುತ್ತಿದ್ದು, ಪ್ರತಿದಿನ ಸುಮಾರು 1,376 ಟ್ಯಾಂಕ್ ನೀರು ಸರಬರಾಜು ಆಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>362 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>‘ಶಾಶ್ವತ ಕುಡಿಯುವ ನೀರಿನ ಯೋಜನೆಗಳಿಗಾಗಿ ಈ ವರ್ಷ ಜಿ.ಪಂ.ಗಳಿಗೆ ₹ 2,600 ಕೋಟಿ ಅನುದಾನ ಕೊಟ್ಟಿದ್ದೇವೆ. ಬರ ಘೋಷಣೆಯಾದ ಬಳಿಕ ಹೆಚ್ಚುವರಿಯಾಗಿ ₹ 134 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p><strong>‘ಹಲ್ಲೆಗೆ ವೈಯಕ್ತಿಕ ವಿಚಾರ ಕಾರಣ’</strong></p>.<p>‘ಶಾಸಕರಾದ ಆನಂದ್ ಸಿಂಗ್, ಜೆ.ಎನ್.ಗಣೇಶ್ ಪ್ರಕರಣದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ವೈಯಕ್ತಿಕ ಮತ್ತು ಸ್ಥಳೀಯ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದಿದೆ ಎಂಬುದು ನನಗೆ ದೊರೆತಿರುವ ಮಾಹಿತಿ’ ಎಂದು ಕೃಷ್ಣಭೈರೇಗೌಡ ಹೇಳಿದರು.</p>.<p>ಈ ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪಕ್ಷದಲ್ಲಿ ಒಡಕು ಇಲ್ಲ. ಯಾವುದೇ ಶಾಸಕರನ್ನು ಬಿಟ್ಟುಕೊಡುವಂತಹ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಗಣೇಶ್ ಅವರನ್ನು ಅಮಾನತು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>