ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಅರ್ಜಿ ದಾಖಲಿಸಿದ್ದು, ವಕೀಲ ಜಿ.ಆರ್.ಮೋಹನ್ ವಕಾಲತ್ತು ವಹಿಸಿದ್ದಾರೆ. ಈ ಅರ್ಜಿ ವಿಚಾರಣೆಗೆ ಬರಬೇಕಿದೆ.ನವದೆಹಲಿಯಲ್ಲಿರುವ ಚಲನಚಿತ್ರೋತ್ಸವ ನಿರ್ದೇಶನಾಲಯದ ಕಾರ್ಯದರ್ಶಿ, 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ–2018ರ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್.ಲಿಂಗದೇವರು ಮತ್ತು ’ನಾತಿಚರಾಮಿ' ಚಿತ್ರದ ನಿರ್ಮಾಪಕ ಎಂ.ರಮೇಶ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.