ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯ ಹಿನ್ನೀರಿನಲ್ಲಿರುವ ಪಕ್ಷಿಗಳ ಪ್ರಮುಖ ಆವಾಸ ಸ್ಥಾನಗಳನ್ನು ‘ಸಂರಕ್ಷಿತ ಪ್ರದೇಶ’ ಎಂದು ಘೋಷಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಅದಕ್ಕೆ ನೀಲನಕ್ಷೆ ಸಿದ್ಧಪಡಿಸಲು ಬೆಂಗಳೂರಿನ ಜಿ.ಕೆ.ವಿ.ಕೆಯ ನಿವೃತ್ತ ವಿಜ್ಞಾನಿ, ಪಕ್ಷಿತಜ್ಞ ಡಾ.ಎಸ್.ಸುಬ್ರಹ್ಮಣ್ಯ ಅವರ ನೆರವು ಪಡೆದಿದೆ.