‘ಗ್ರಾಮ್ ಸ್ವರಾಜ್ ಅಭಿಯಾನ’ದ ಅಂಗವಾಗಿ ಸರ್ಕಾರಿ ಯೋಜನೆಗಳ ಯಶಸ್ಸಿನ ವಾಸ್ತವಾಂಶ ತಿಳಿದುಕೊಳ್ಳಲು ಇಲ್ಲಿನ ‘ಗ್ರಾಮಸಭೆ’ಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸ್ಥಳೀಯರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದರು. ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.