ಬಂದ್ನಿಂದ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಪುಣೆ, ಮುಂಬೈ ಸೇರಿದಂತೆ ವಿವಿಧ ಭಾಗಗಳಿಗೆ ಹೋಗಬೇಕಿದ್ದ ವಾಹನಗಳು ರಸ್ತೆಬದಿ ಸಾಲುಗಟ್ಟಿ ನಿಂತಿದ್ದವು. ಜನ ವಾಹನಗಳಲ್ಲಿಯೇ ಕಾಲ ಕಳೆದು ಸುಸ್ತು ಹೊಡೆದರು. ದೈನಂದಿನ ಕೆಲಸಗಳಿಗೆ ಹೋಗುವವರು ರಸ್ತೆಬದಿಯಲ್ಲಿಯೇ ವಾಹನಗಳನ್ನು ನಿಲ್ಲಿಸಿ, ಕಾಲ್ನಡಿಗೆಯಲ್ಲಿ ತೆರಳಿದರು.