ಈ ಸ್ಪರ್ಧೆಯ ಮೊದಲ ಆವೃತ್ತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಗೆದ್ದವರಿಗೆ ರಾಷ್ಟ್ರಮಟ್ಟದ ಸ್ಪರ್ಧೆ ಒಳ್ಳೆಯ ವೇದಿಕೆ ಒದಗಿಸಿದೆ ಎಂದು ವರ್ಬ್ಯಾಟಲ್ನ ದೀಪಕ್ ತಿಮ್ಮಯ ಅಭಿಮಾನದಿಂದ ಹೇಳಿದರು. ಲೇಖಕಿ ಸುಮಾ ಪೊನ್ನಮ್ಮ, ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್ನ ನಿಖಿಲ್ ಕನೇಕಲ್, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕಾರ್ಯತಂತ್ರ ಮತ್ತು ಯೋಜನಾ ವಿಭಾಗದ ನಿರ್ದೇಶಕ ಕ್ರಿಸ್ಟೊ ವಿ. ಜೋಸೆಫ್ ತೀರ್ಪುಗಾರರಾಗಿದ್ದರು.