<p><strong>ಮಂಗಳೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹ 2,059 ಕೋಟಿ ಬಾಕಿ ಇರಿಸಿಕೊಂಡಿದೆ. ನೆನಪೋಲೆ ಕಳಿಸಿದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆರೋಪಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೆಲಸ ಮುಗಿಸಿ ಬಿಲ್ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಜನರಿಗೆ ತೊಂದರೆ ಆಗಿದೆ. ಈ ಕಾರಣದಿಂದ ₹ 2,059 ಕೋಟಿಯನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ನಿರ್ಧರಿಸಲಾಗಿದೆ' ಎಂದರು.</p>.<p>‘ಹಲವು ತಿಂಗಳುಗಳಿಂದ ನರೇಗಾಯೋಜನೆಯ ಅನುದಾನ ಬಿಡುಗಡೆ ಮಾಡಿಲ್ಲ. ಸಾಮಾನ್ಯ ಜನರ ಅನುಕೂಲಕ್ಕಾಗಿ ಜಾರಿಗೊಳಿಸಿದ ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಇಂತಹ ನಿಲುವು ತಾಳಿರುವುದು ದುರ್ದೈವದ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬರ ಪರಿಸ್ಥಿತಿ ಇರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. 100 ತಾಲ್ಲೂಕುಗಳಿಗೆ ತಲಾ ₹ 1 ಕೋಟಿ, 62 ತಾಲ್ಲೂಕುಗಳಿಗೆ ತಲಾ ₹ 50 ಲಕ್ಷ ಮತ್ತು ಇತರೆ ತಾಲ್ಲೂಕುಗಳಿಗೆ ತಲಾ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಮಹಾನಗರ ಪಾಲಿಕೆಗಳಿಗೆ ತಲಾ ₹ 50 ಲಕ್ಷ, ನಗರಸಭೆಗಳಿಗೆ ತಲಾ ₹ 25 ಲಕ್ಷ ಮತ್ತು ಪಟ್ಡಣ ಪಂಚಾಯಿತಿಗಳಿಗೆ ತಲಾ ₹ 10 ಲಕ್ಷ ಒದಗಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹ 2,059 ಕೋಟಿ ಬಾಕಿ ಇರಿಸಿಕೊಂಡಿದೆ. ನೆನಪೋಲೆ ಕಳಿಸಿದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆರೋಪಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೆಲಸ ಮುಗಿಸಿ ಬಿಲ್ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಜನರಿಗೆ ತೊಂದರೆ ಆಗಿದೆ. ಈ ಕಾರಣದಿಂದ ₹ 2,059 ಕೋಟಿಯನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ನಿರ್ಧರಿಸಲಾಗಿದೆ' ಎಂದರು.</p>.<p>‘ಹಲವು ತಿಂಗಳುಗಳಿಂದ ನರೇಗಾಯೋಜನೆಯ ಅನುದಾನ ಬಿಡುಗಡೆ ಮಾಡಿಲ್ಲ. ಸಾಮಾನ್ಯ ಜನರ ಅನುಕೂಲಕ್ಕಾಗಿ ಜಾರಿಗೊಳಿಸಿದ ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಇಂತಹ ನಿಲುವು ತಾಳಿರುವುದು ದುರ್ದೈವದ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬರ ಪರಿಸ್ಥಿತಿ ಇರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. 100 ತಾಲ್ಲೂಕುಗಳಿಗೆ ತಲಾ ₹ 1 ಕೋಟಿ, 62 ತಾಲ್ಲೂಕುಗಳಿಗೆ ತಲಾ ₹ 50 ಲಕ್ಷ ಮತ್ತು ಇತರೆ ತಾಲ್ಲೂಕುಗಳಿಗೆ ತಲಾ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಮಹಾನಗರ ಪಾಲಿಕೆಗಳಿಗೆ ತಲಾ ₹ 50 ಲಕ್ಷ, ನಗರಸಭೆಗಳಿಗೆ ತಲಾ ₹ 25 ಲಕ್ಷ ಮತ್ತು ಪಟ್ಡಣ ಪಂಚಾಯಿತಿಗಳಿಗೆ ತಲಾ ₹ 10 ಲಕ್ಷ ಒದಗಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>