ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ರೆಸಾರ್ಟ್‌ನಲ್ಲಿ ದೇವೇಗೌಡರಿಗೆ ಪ್ರಕೃತಿ ಚಿಕಿತ್ಸೆ

Last Updated 9 ಮೇ 2019, 12:26 IST
ಅಕ್ಷರ ಗಾತ್ರ

ಉಡುಪಿ: ಮಾಜಿ ಪ್ರಧಾನಿ ದೇವೇಗೌಡರು ಪ್ರಕೃತಿ ಚಿಕಿತ್ಸೆ ಪಡೆಯಲು ಮತ್ತೆ ಕಾಪು ಬಳಿಯ ಮೂಳೂರಿನಲ್ಲಿರುವ ಸಾಯಿರಾಧಾ ರೆಸಾರ್ಟ್‌ಗೆ ಬಂದಿದ್ದಾರೆ.

ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ದೇವೇಗೌಡರು ಕಾರಿನಲ್ಲಿ ಕಾಪುವಿನ ರೆಸಾರ್ಟ್‌ಗೆ ಬಂದರು. ದೇವೇಗೌಡರ ಜತೆ ಪತ್ನಿ ಚನ್ನಮ್ಮ ಅವರೂ ಇದ್ದರು.‌

ದೇವೇಗೌಡರಿಗೆ ಮೊಣಕಾಲಿನಲ್ಲಿ ವಿಪರೀತ ನೋವಿದ್ದು ಆಯುರ್ವೇದ ತಜ್ಞರಾದ ತನ್ಮಯ ಗೋಸ್ವಾಮಿ ನೇತೃತ್ವದ ತಂಡ ಪಂಚಕರ್ಮ ಚಿಕಿತ್ಸೆ ನೀಡುತ್ತಿದೆ. ಮೇ 16ರವರೆಗೂ ಗೌಡರು ರೆಸಾರ್ಟ್‌ನಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತ್ನಿ ಚನ್ನಮ್ಮ ಅವರೂ ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ದೇವೇಗೌಡರು ಪುತ್ರ ಕುಮಾರಸ್ವಾಮಿ ಅವರ ಜತೆ ಬಂದು ಪ್ರಕೃತಿಚಿಕಿತ್ಸೆ ಪಡೆದುಕೊಂಡು ತೆರಳಿದ್ದರು.

ರೆಸಾರ್ಟ್‌ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT