‘40 ವರ್ಷಗಳಿಂದ ಈಚೆಗೆ ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಇದೆ. ರಾಜ್ಯ ಸರ್ಕಾರ ಬರಗಾಲದ ಸನ್ನಿವೇಶ ಎದುರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಬರ ನಿರ್ವಹಣೆ ಮಾಡುವ ಬದಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಅವರ ಸಂಪುಟದ ಸಚಿವರೂ ಗಮನಹರಿಸುತ್ತಿಲ್ಲ’ ಎಂದು ದೂರಿದರು.