‘ಅಧಿಕಾರಕ್ಕೆ ಅಂಟಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೆ ವಿಶ್ವಾಸಮತ ನಿರ್ಣಯದ ಮೇಲೆ ವಿಸ್ತೃತ ಚರ್ಚೆ ನಡೆಯಲು ಹೆಚ್ಚು ಸಮಯ ಕೇಳಿದ್ದು, ಬಿಜೆಪಿಯ ಅನೈತಿಕ ಮಾರ್ಗಗಳ ಕುರಿತು ಶಾಸಕರು ಮಾತನಾಡಬೇಕಿದೆ. ಪ್ರಜಾಪ್ರಭುತ್ವ, ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದು ಇಡೀ ದೇಶಕ್ಕೆ ಅರಿವಾಗಿದೆ’ ಎಂದು ತಿಳಿಸಿದ್ದಾರೆ.