ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಮಹಿಳೆಯರಿಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಮಹತ್ವದ ತೀರ್ಪು. ಅದನ್ನು ರಾಜ್ಯದ ಮಹಿಳಾ ಆಯೋಗ ಸ್ವಾಗತಿಸಬೇಕು. ಆದರೆ, ನಾಗಲಕ್ಷ್ಮಿ ಬಾಯಿ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆ ಪ್ರವೇಶ ವಿಷಯದಲ್ಲಿ ತಾವು ಮಹಿಳೆಯರ ಪರ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ. ದೇಗುಲ ಪ್ರವೇಶ ಸಾಂವಿಧಾನಿಕ ಹಕ್ಕು. ಮಹಿಳಾ ಆಯೋಗ ಅಧ್ಯಕ್ಷರು ಸಂವಿಧಾನ ಪಾಲಿಸಬೇಕು. ಅದನ್ನು ಬಿಟ್ಟು ಮನುಸ್ಮೃತಿ ಪಾಲಿಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.