<p><strong>ತಾವರಗೇರಾ (ಕೊಪ್ಪಳ ಜಿಲ್ಲೆ):</strong> ಕುಷ್ಟಗಿ ತಾಲ್ಲೂಕಿನ ನವಲಹಳ್ಳಿ ಗ್ರಾಮದ ಮಂಜುನಾಥ ಹವಳಪ್ಪ ದೊಡ್ಡಮನಿ ಅವರು ರಾಷ್ಟ್ರೀಯ ವೈದ್ಯಕೀಯ ಅರ್ಹತಾ (ನೀಟ್– ಸೂಪರ್ ಸ್ಪೆಷಾಲಿಟಿ) ಪರೀಕ್ಷೆಯಎಂಡೊಕ್ರೈನೊಲಾಜಿ (ಅಂತಃಸ್ರಾವಶಾಸ್ತ್ರ) ವಿಷಯದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.</p>.<p>ನವಲಹಳ್ಳಿಯಲ್ಲಿ ಶಿಕ್ಷಣ ಪೂರೈಸಿದ ಮಂಜುನಾಥ ಅವರು ಹೊಸಪೇಟೆಯ ‘ಸ್ಮಯೋರ್’ಕಾಲೇಜಿನಲ್ಲಿ ಪಿಯು ವಿಜ್ಞಾನ ಶಿಕ್ಷಣ ಪಡೆದರು.ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿ, ವೈದ್ಯಕೀಯ ಎಂ.ಡಿ ಕೋರ್ಸ್ ಅನ್ನು ಚಂಡೀಗಡದಲ್ಲಿ ಪೂರೈಸಿದರು.</p>.<p>‘ಚಂಡೀಗಡದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣದ ಜೊತೆಗೆ ಗ್ರಂಥಾಲಯದಲ್ಲಿ ಉಪಯುಕ್ತ ಪುಸ್ತಕಗಳು ಸಿಕ್ಕಿದವು. ದಿನಕ್ಕೆ 16 ಗಂಟೆ ಅಭ್ಯಾಸ ಮಾಡುವುದಲ್ಲದೆ ಸ್ನೇಹಿತರ ಜೊತೆ ಚರ್ಚಿಸುತ್ತಿದ್ದೆ. ಎಂಡೊಕ್ರೈನೊಲಾಜಿ ಪರೀಕ್ಷೆಗೆ 1,600 ಅಭ್ಯರ್ಥಿಗಳು ಹಾಜರಾಗಿದ್ದರು’ ಎಂದು ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಂಜುನಾಥ ಅವರ ತಂದೆ ಹವಳಪ್ಪ ಬಾಗಲಕೋಟೆಯ ಬದಾಮಿ ತಾಲ್ಲೂಕಿನ ಹವಳಕೋಡದವರು. 1998ರಿಂದ ನವಲಹಳ್ಳಿಯಲ್ಲಿ ನೆಲೆಸಿರುವ ಅವರು ಕುಷ್ಟಗಿಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ (ಕೊಪ್ಪಳ ಜಿಲ್ಲೆ):</strong> ಕುಷ್ಟಗಿ ತಾಲ್ಲೂಕಿನ ನವಲಹಳ್ಳಿ ಗ್ರಾಮದ ಮಂಜುನಾಥ ಹವಳಪ್ಪ ದೊಡ್ಡಮನಿ ಅವರು ರಾಷ್ಟ್ರೀಯ ವೈದ್ಯಕೀಯ ಅರ್ಹತಾ (ನೀಟ್– ಸೂಪರ್ ಸ್ಪೆಷಾಲಿಟಿ) ಪರೀಕ್ಷೆಯಎಂಡೊಕ್ರೈನೊಲಾಜಿ (ಅಂತಃಸ್ರಾವಶಾಸ್ತ್ರ) ವಿಷಯದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.</p>.<p>ನವಲಹಳ್ಳಿಯಲ್ಲಿ ಶಿಕ್ಷಣ ಪೂರೈಸಿದ ಮಂಜುನಾಥ ಅವರು ಹೊಸಪೇಟೆಯ ‘ಸ್ಮಯೋರ್’ಕಾಲೇಜಿನಲ್ಲಿ ಪಿಯು ವಿಜ್ಞಾನ ಶಿಕ್ಷಣ ಪಡೆದರು.ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿ, ವೈದ್ಯಕೀಯ ಎಂ.ಡಿ ಕೋರ್ಸ್ ಅನ್ನು ಚಂಡೀಗಡದಲ್ಲಿ ಪೂರೈಸಿದರು.</p>.<p>‘ಚಂಡೀಗಡದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣದ ಜೊತೆಗೆ ಗ್ರಂಥಾಲಯದಲ್ಲಿ ಉಪಯುಕ್ತ ಪುಸ್ತಕಗಳು ಸಿಕ್ಕಿದವು. ದಿನಕ್ಕೆ 16 ಗಂಟೆ ಅಭ್ಯಾಸ ಮಾಡುವುದಲ್ಲದೆ ಸ್ನೇಹಿತರ ಜೊತೆ ಚರ್ಚಿಸುತ್ತಿದ್ದೆ. ಎಂಡೊಕ್ರೈನೊಲಾಜಿ ಪರೀಕ್ಷೆಗೆ 1,600 ಅಭ್ಯರ್ಥಿಗಳು ಹಾಜರಾಗಿದ್ದರು’ ಎಂದು ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಂಜುನಾಥ ಅವರ ತಂದೆ ಹವಳಪ್ಪ ಬಾಗಲಕೋಟೆಯ ಬದಾಮಿ ತಾಲ್ಲೂಕಿನ ಹವಳಕೋಡದವರು. 1998ರಿಂದ ನವಲಹಳ್ಳಿಯಲ್ಲಿ ನೆಲೆಸಿರುವ ಅವರು ಕುಷ್ಟಗಿಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>