ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ: ಶ್ರೀಮಂತ ಪಾಟೀಲ

Last Updated 25 ಏಪ್ರಿಲ್ 2019, 7:36 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ’ಎಂದು ಕಾಗವಾಡ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ ಹೇಳಿದರು.

ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಮತ್ತು ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ರಾಜೀನಾಮೆ ಕೊಡುವ ಯೋಚನೆಯೇ ಇಲ್ಲ. ನಮ್ಮ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇತ್ತು. ಈ ಬಗ್ಗೆ ಸಚಿವರ ಬಳಿ ಚರ್ಚೆ ಮಾಡಲು ಬಂದಿದ್ದೆ. ಅದು ಬಿಟ್ಟು ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ’ಎಂದರು.

ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ:ಬೆಳಗಾವಿಯಿಂದ ಬಂದಿದ್ದ ಕೆಲ ಆಪ್ತರ ಜೊತೆ ತಮ್ಮ ಸರ್ಕಾರಿ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಚರ್ಚೆ ನಡೆಸಿದ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೋಳಿ, ಯಾರಿಗೂ ಮಾಹಿತಿ ನೀಡದೆ ಅಜ್ಞಾತ ಸ್ಥಳಕ್ಕೆ ತೆರಳಿದರು

ಬುಧವಾರದಿಂದಲೂ ರಮೇಶ ಅವರು ಅತೃಪ್ತ ಶಾಸಕರ ಸಂಪರ್ಕಕ್ಕೆ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT