ಉಪಚುನಾವಣೆ ಫಲಿತಾಂಶ ಬಳಿಕವಿಧಾನಸಭೆ ವಿರೋಧ ಪಕ್ಷದ ನಾಯಕನಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ನಾಯಕರುನೀಡಿರುವ ರಾಜೀನಾಮೆ ಒಪ್ಪಿಕೊಳ್ಳಬೇಕೆ, ಬೇರೆಯವರನ್ನು ನೇಮಿಸಬೇಕೆಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆಮುಖಂಡರಾದ ಮಧುಸೂದನ ಮಿಸ್ತ್ರಿ, ಭಕ್ತಚರಣದಾಸ್ ಗುರುವಾರ ನಗರಕ್ಕೆ ಭೇಟಿ ನೀಡಿದ್ದರು.