<p><strong>ಕಲಬುರ್ಗಿ: </strong>ಹೊಸದಾಗಿ ರಚನೆಯಾದ ತಾಲ್ಲೂಕುಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಚರ್ಚಿಸಲು ಇದೇ 4ರಂದು ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಅಫಜಲಪುರ ತಾಲ್ಲೂಕಿನ ಗೊಬ್ಬುರ (ಕೆ) ಗ್ರಾಮದಲ್ಲಿ ಬುಧವಾರ ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ತಾಲ್ಲೂಕುಗಳಲ್ಲಿ ಇನ್ನೂ ಮೂಲಸೌಕರ್ಯ ಕಲ್ಪಿಸಬೇಕಿದೆ. ಬರೀ ಕಂದಾಯ ಕಚೇರಿಗಳಷ್ಟೇ ಆರಂಭವಾಗಿವೆ ಎಂದರು.</p>.<p>ಹಣದ ಕೊರತೆ ಇಲ್ಲ: ರಾಜ್ಯದಾದ್ಯಂತ ಬರಗಾಲ ಕಾಮಗಾರಿ ಕೈಗೆತ್ತಿಕೊಳ್ಳಲು ಯಾವುದೇ ಹಣದ ಕೊರತೆ ಇಲ್ಲ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಖಾತೆಯಲ್ಲಿ ₹ 600 ಕೋಟಿ ಹಣ ಇದೆ. ಕಲಬುರ್ಗಿ ಜಿಲ್ಲಾಧಿಕಾರಿ ಖಾತೆಯಲ್ಲಿ ₹ 12 ಕೋಟಿ ಇದೆ ಎಂದರು.</p>.<p><strong>ನಾಲ್ಕು ತಂಡಗಳು:</strong> ಬರಗಾಲ ಕಾಮಗಾರಿಗಳನ್ನು ಪರಿಶೀಲಿಸಲು ಕಂದಾಯ, ಸಹಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಚಿವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ನಾನು ಈಗಾಗಲೇ 16 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ ಎಂದು ದೇಶಪಾಂಡೆ ಹೇಳಿದರು.</p>.<p>ಶಾಸಕರ ರಾಜೀನಾಮೆ ವಿಚಾರ ಅಧ್ಯಕ್ಷರು ನೋಡಿಕೊಳ್ತಾರೆ: ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಸುಭದ್ರವಾಗಿದೆ. ಶಾಸಕರ ರಾಜೀನಾಮೆ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಅದನ್ನು ಪಕ್ಷದ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.</p>.<p>ಟ್ಯಾಂಕರ್ ನೀರು ಪೂರೈಕೆಯನ್ನು ಮೂರು ತಿಂಗಳಿಗಿಂತ ಹೆಚ್ಚು ವಿಸ್ತರಿಸಬಾರದು ಎಂಬುದು ಕೇಂದ್ರ ಸರ್ಕಾರದ ನಿಯಮ. ಆದಾಗ್ಯೂ, ಎಷ್ಟು ಬೇಕಾದರೂ ವಿಸ್ತರಿಸಬಹುದು ಎಂದು ಸಡಿಲಿಕೆ ನೀಡಲಾಗಿದೆ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿ.ಪಂ. ಸಿಇಒ ಡಾ.ರಾಜಾ ಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಹೊಸದಾಗಿ ರಚನೆಯಾದ ತಾಲ್ಲೂಕುಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಚರ್ಚಿಸಲು ಇದೇ 4ರಂದು ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಅಫಜಲಪುರ ತಾಲ್ಲೂಕಿನ ಗೊಬ್ಬುರ (ಕೆ) ಗ್ರಾಮದಲ್ಲಿ ಬುಧವಾರ ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ತಾಲ್ಲೂಕುಗಳಲ್ಲಿ ಇನ್ನೂ ಮೂಲಸೌಕರ್ಯ ಕಲ್ಪಿಸಬೇಕಿದೆ. ಬರೀ ಕಂದಾಯ ಕಚೇರಿಗಳಷ್ಟೇ ಆರಂಭವಾಗಿವೆ ಎಂದರು.</p>.<p>ಹಣದ ಕೊರತೆ ಇಲ್ಲ: ರಾಜ್ಯದಾದ್ಯಂತ ಬರಗಾಲ ಕಾಮಗಾರಿ ಕೈಗೆತ್ತಿಕೊಳ್ಳಲು ಯಾವುದೇ ಹಣದ ಕೊರತೆ ಇಲ್ಲ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಖಾತೆಯಲ್ಲಿ ₹ 600 ಕೋಟಿ ಹಣ ಇದೆ. ಕಲಬುರ್ಗಿ ಜಿಲ್ಲಾಧಿಕಾರಿ ಖಾತೆಯಲ್ಲಿ ₹ 12 ಕೋಟಿ ಇದೆ ಎಂದರು.</p>.<p><strong>ನಾಲ್ಕು ತಂಡಗಳು:</strong> ಬರಗಾಲ ಕಾಮಗಾರಿಗಳನ್ನು ಪರಿಶೀಲಿಸಲು ಕಂದಾಯ, ಸಹಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಚಿವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ನಾನು ಈಗಾಗಲೇ 16 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ ಎಂದು ದೇಶಪಾಂಡೆ ಹೇಳಿದರು.</p>.<p>ಶಾಸಕರ ರಾಜೀನಾಮೆ ವಿಚಾರ ಅಧ್ಯಕ್ಷರು ನೋಡಿಕೊಳ್ತಾರೆ: ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಸುಭದ್ರವಾಗಿದೆ. ಶಾಸಕರ ರಾಜೀನಾಮೆ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಅದನ್ನು ಪಕ್ಷದ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.</p>.<p>ಟ್ಯಾಂಕರ್ ನೀರು ಪೂರೈಕೆಯನ್ನು ಮೂರು ತಿಂಗಳಿಗಿಂತ ಹೆಚ್ಚು ವಿಸ್ತರಿಸಬಾರದು ಎಂಬುದು ಕೇಂದ್ರ ಸರ್ಕಾರದ ನಿಯಮ. ಆದಾಗ್ಯೂ, ಎಷ್ಟು ಬೇಕಾದರೂ ವಿಸ್ತರಿಸಬಹುದು ಎಂದು ಸಡಿಲಿಕೆ ನೀಡಲಾಗಿದೆ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿ.ಪಂ. ಸಿಇಒ ಡಾ.ರಾಜಾ ಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>