ಜಿ.ಪರಮೇಶ್ವರ ಮಾತನಾಡಿ, ‘ಬೆಂಗಳೂರು ಪೊಲೀಸರು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇಲಾಖೆಗೆ ಇನ್ನಷ್ಟು ಬಲ ತುಂಬಲು ದ್ವಿಚಕ್ರ ವಾಹನಗಳನ್ನು ನೀಡಲಾಗಿದೆ. ಈಗಾಗಲೇ 300 ಹೊಯ್ಸಳ ಕಾರುಗಳು ಗಸ್ತು ತಿರುಗುತ್ತಿವೆ. ಆದರೆ, ಕೆಲವು ಬೀದಿಗಳಿಗೆ ಕಾರುಗಳು ಹೋಗಲು ಸಾಧ್ಯವಿಲ್ಲ. ಹೀಗಾಗಿ ನಗರದೆಲ್ಲೆಡೆ ಗಸ್ತು ತಿರುಗಲು ಬೈಕ್ಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು.