ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂಲತಃ ಭಟ್ಕಳದವರಾದಆ ಯುವಕ, ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರು. ಅವರ ಕುಟುಂಬ ಮಂಗಳೂರಿನಲ್ಲಿ ನೆಲೆಸಿದೆ. ಮೂಲ ಮನೆಯಲ್ಲಿ ಮದುವೆಯಾದ ಅವರು ಜೂನ್ 26ರಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿ ಅವರನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಮಾದರಿಯ ಪರೀಕ್ಷಾ ವರದಿ ಬರುವ ಮೊದಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.