‘ಮಹಾಮಳೆ, ಭೂಕುಸಿತದಿಂದ 35 ಸಾವಿರ ರೈತರು ನಷ್ಟ ಅನುಭವಿಸಿದ್ದಾರೆ. ಆದರೆ, 1,277 ರೈತರಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ. ಉಳಿದವರಿಗೆ ಬಿಡಿಗಾಸೂ ಸಿಕ್ಕಿಲ್ಲ’ ಎಂದು ತಿಳಿಸಿದರು.
‘ಸಂತ್ರಸ್ತರ ಮನೆ ನಿರ್ಮಾಣವು ಚುರುಕು ಪಡೆಯದಿದ್ದರೆ ಬಿಜೆಪಿಯು ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲಿದೆ’ ಎಂದು ಎಚ್ಚರಿಸಿದರು.