ರೈತ ಸಂಘದ ಮಂಡ್ಯ ಜಿಲ್ಲಾ ಅಧ್ಯಕ್ಷ ಸುರೇಶ್ ಮಾತನಾಡಿ, ‘ಕಾವೇರಿ ಕಣಿವೆ ರೈತರು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಬೆಳೆಗಳಿಗೆ ಇರಲಿ, ಕುಡಿಯಲು ನೀರಿಲ್ಲದ ಸ್ಥಿತಿ ಬಂದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದ್ವೇಷದ ರಾಜಕಾರಣ ಮಾಡಿ ಮಂಡ್ಯ ಜಿಲ್ಲೆಯ ರೈತರನ್ನು ಹಿಂಸಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.