ಮಡಿಕೇರಿ: ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಮಂಗಳವಾರ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ತನಕವೂ ಬಿಸಿಲ ವಾತಾವರಣವಿತ್ತು. ಬಳಿಕ, ಸಾಧಾರಣ ಮಳೆ ಸುರಿಯಿತು.
ಮಡಿಕೇರಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಇರ್ಪು, ಹುದಿಕೇರಿ ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿದೆ. ಸೋಮವಾರಪೇಟೆ, ವಿರಾಜಪೇಟೆ, ಶನಿವಾರಸಂತೆ, ಕೊಡ್ಲಿಪೇಟೆಯಲ್ಲಿ ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಬಹುತೇಕ ಕಡೆ ಪ್ರವಾಹ ಇಳಿದಿದ್ದು ವಾಹನ ಸಂಚಾರ ಆರಂಭವಾಗಿದೆ.