‘ಮಕ್ಕಳಿಗೆ ಕೊಡಬೇಕಾದ ವಸ್ತುಗಳನ್ನು ಮನೆಗೆ ಹೊತ್ತೊಯ್ಯುತ್ತಾರೆ. ಅಲ್ಲದೇ ಸರಿಯಾದ ಸಮಯಕ್ಕೆ ಕೆಲಸಕ್ಕೂ ಬರುವುದಿಲ್ಲ. ಅದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಜಾತಿ ವಿರೋಧಿಗಳ ಪಟ್ಟಕಟ್ಟುತ್ತಿದ್ದಾರೆ. ಅವರು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ. ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ತನಕ ಮಕ್ಕಳನ್ನು ಈ ಕೇಂದ್ರಕ್ಕೆ ಕಳುಹಿಸುವುದಿಲ್ಲ’ ಎಂದು ಗ್ರಾಮಸ್ಥ ಮಂಜುನಾಥ್ ಹೇಳಿದರು.