ಸೋಮವಾರಪೇಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕಾಫಿ ಎಸ್ಟೇಟ್ವೊಂದರಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಅರ್ಜುನ್ ಅವರ ಪುತ್ರ ಭುವನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಪರೀಕ್ಷೆ ಬರೆದಿದ್ದ. ಫಲಿತಾಂಶ ಬಂದ ಮೇಲೆ ಮಾನಸಿಕವಾಗಿ ನೊಂದು ಹೋಗಿದ್ದ ಎನ್ನಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.