ಜಿಲ್ಲೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭಿಸುತ್ತಿಲ್ಲ. ಪ್ರಾಥಮಿಕ ಹಂತದ ಚಿಕಿತ್ಸೆ ಅಷ್ಟೇ ಸಿಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಮೈಸೂರು, ಬೆಂಗಳೂರು, ಮಂಗಳೂರು, ಸುಳ್ಯಕ್ಕೆ ತೆರಳಬೇಕು. ಯಾವುದೇ ಅಪಘಾತ ಹಾಗೂ ದೊಡ್ಡ ಪ್ರಮಾಣದ ಕಾಯಿಲೆಗೆ ಇಲ್ಲಿ ಚಿಕಿತ್ಸೆ ಇಲ್ಲದೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ಯುವಲ್ಲಿಯೇ ಅನೇಕರು ಪ್ರಾಣ ಬಿಟ್ಟಿದ್ದಾರೆ ಎಂದು ನೋವು ಕಾಡುತ್ತಲೇ ಇದೆ. ಹೀಗಾಗಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಭಿಯಾನ ಆರಂಭವಾಗಿದೆ.