ಮಳೆಗಾಲ ಆರಂಭವಾಗಿರುವುದರಿಂದ ಜತೆಗೆ ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾದ ಸಮಸ್ಯೆಯಿಂದ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ (ಜಿಎಸ್ಐ), ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ ಹಾಗೂ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದೆ. ಇಂತಹ ಪ್ರದೇಶಗಳಲ್ಲಿ ವೈಯಕ್ತಿಕ ಉಪಯೋಗಕ್ಕೆ ಮರ ಕಡಿಯುವುದನ್ನು ಹೊರತುಪಡಿಸಿ ಸಾಮೂಹಿಕ ಅಥವಾ ಬೃಹತ್ ಪ್ರಮಾಣದಲ್ಲಿ ಮರಗಳ ಕಡಿತಲೆಗೆ ಅನುಮತಿ ನೀಡದಿರಲು ಸಭೆಯಲ್ಲಿ ತೀರ್ಮಾನಿಸಲಾಯಿತು.