ಮಡಿಕೇರಿ ತಾಲ್ಲೂಕು ಪೆರಾಜೆ ಗ್ರಾಮದ ಪ್ರೊ.ಕೋಡಿ ಕುಶಾಲಪ್ಪಗೌಡ (ಅರೆಭಾಷೆ ಸಾಹಿತ್ಯ ಕ್ಷೇತ್ರ), ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಡಾ.ಎನ್.ಸುಕುಮಾರಗೌಡ (ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರ), ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಕಾಳೆಯಂಡ ತಂಗಮ್ಮ ಅಪ್ಪಚ್ಚ (ಅರೆಭಾಷೆ ಸಂಸ್ಕೃತಿ ಕ್ಷೇತ್ರ) ಅವರಿಗೆ ಈ ಬಾರಿಯ ಪ್ರಶಸ್ತಿ ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.