ಮೈಸೂರು/ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತು. ಪಾಲಿಬೆಟ್ಟ, ನೆಲ್ಯಹುದಿಕೇರಿ, ಅಮ್ಮತ್ತಿ, ಸುಂಟಿಕೊಪ್ಪ, ನಾಪೋಕ್ಲು, ಚೇರಂಬಾಣೆಯಲ್ಲಿ ಒಳ್ಳೆಯ ಮಳೆಯಾಗಿದೆ.