ಸ್ಥಳಕ್ಕೆ ನಾಗರಹೊಳೆ ಹುಲಿ ಸಂರಕ್ಷಣಾ ಕೇಂದ್ರದ ನಿರ್ದೇಶಕ ನಾರಾಯಣ ಸ್ವಾಮಿ, ಎಸಿಎಫ್ ಪ್ರಸನ್ನ ಕುಮಾರ್, ಮತ್ತಿಗೋಡು ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶಿವಾನಂದ್ ಲಿಂಗಾಣಿ, ಡಿಆರ್ ಎಫ್ ಒ ಶಿವಲಿಂಗಯ್ಯ,ಫಾರೆಸ್ಟರ್ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು. ಹುಣಸೂರು ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿ ಮುಜೂಬ್ ರೆಹಮಾನ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಡುಕೋಣವನ್ನು ಸ್ಥಳದಲ್ಲಿಯೇ ದಹಿಸಲಾಯಿತು.