ಬೆಂಗಳೂರು: ‘ಪ್ರಬಲ ಸುಳಿಗಾಳಿ ಇರುವುದರಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಕ್ಷೀಣಿಸಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿಯೂ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದಿದೆ. ಬಿಸಿಲು ಅಧಿಕವಾಗಿರುವುದರಿಂದಾಗಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.