ಜಗದ ಕಣ್ಣು ತೆರೆಸಿದ ಪಂಚಾಕ್ಷರಿ ಗವಾಯಿ ಮತ್ತು ಪುಟ್ಟರಾಜ ಕವಿಗವಾಯಿ, ಜಗಕ್ಕೆ ಜೋಗುಳ ಹಾಡಿದ ಅಮ್ಮ ಗಂಗೂಬಾಯಿ ಹಾನಗಲ್, ಹಾನಗಲ್ ಕುಮಾರೇಶ್ವರ ಸ್ವಾಮೀಜಿ, ದೇಶಕ್ಕಾಗಿ ಜೀವ ಬಲಿದಾನ ಮಾಡಿದ ಮೈಲಾರ ಮಹದೇವಪ್ಪ, ತಿರಕಪ್ಪ ಮಡಿವಾಳರ, ಸಾಹಿತ್ಯ ರತ್ನ ಸು.ರಂ.ಯಕ್ಕುಂಡಿ, ಕರ್ನಾಟಕ ಏಕೀಕರಣದಲ್ಲಿ ಮಹತ್ತರ ಪಾತ್ರ ವಹಿಸಿದ ಹೊಸಮನಿ ಸಿದ್ದಪ್ಪ,ಪಾಟೀಲ ಪುಟ್ಟಪ್ಪ, ಆಧುನಿಕ ವಚನಕಾರ ಮಹಾದೇವ ಬಣಕಾರ ಮುಂತಾದ ಮಹನೀಯರು ಇದೇ ಮಣ್ಣಿನಲ್ಲಿ ಹುಟ್ಟಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಜ್ವಲಗೊಳಿಸಿದ್ದಾರೆ.