‘ಹಾಸನ ಜಿಲ್ಲೆಯಲ್ಲಿ ಜೆಡಿಎಸ್ನ ಆರು ಶಾಸಕರಿದ್ದೇವೆ. ನಮಗೆ ಸಿಗಬೇಕಾದ ಸ್ಥಾನಮಾನಗಳು ಸಿಗಲೇಬೇಕು. ನಮ್ಮ ಜಿಲ್ಲೆ ವಿಷಯದಲ್ಲಿ ನಮ್ಮ ಮಾತು ಕೇಳಬೇಕು’ ಎಂದು ಎಚ್ಚರಿಕೆ ನೀಡಿದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಕೈತಪ್ಪಿದ ಕಾರಣಕ್ಕೆ ಜೆಡಿಎಸ್ ವಿರುದ್ಧ ತಿರುಗಿಬಿದ್ದಿರುವ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ಗೆ ತಿರುಗೇಟು ನೀಡಿದ ರೇವಣ್ಣ, ‘ನಾವು ಏಕೆ ಕಾಂಗ್ರೆಸ್ನವರಿಗೆ ನೀಡಿರುವ ನಿಗಮ ಮಂಡಳಿಗಳನ್ನು ತೆಗೆದುಕೊಳ್ಳಬೇಕು. ನಮಗೆ ಹೇಳಲು, ದೇವೇಗೌಡ ಕುಟುಂಬದ ಬಗ್ಗೆ ಹೇಳಲು ಅವನು ಯಾರು’ ಎಂದು ಖಾರವಾಗಿ ಪ್ರಶ್ನಿಸಿದರು. ‘ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಈಗಾಗಲೇ ಈ ಬಗ್ಗೆ ಹೇಳಿದ್ದೇನೆ. ನಮ್ಮ ಪಕ್ಷದ ವಿಷಯ ನಮಗೆ ಇರಲಿ, ಅವರು ಅವರ ಪಕ್ಷದವರ ಮೇಲೆ ನಿಗಾ ಇಟ್ಟುಕೊಳ್ಳಲಿ’ ಎಂದು ಸಲಹೆ ನೀಡಿದರು.