ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಖಿಲ್ ಕುಮಾರಸ್ವಾಮಿ ಮದುವೆ: ರಾಜ್ಯ ಸರ್ಕಾರದಿಂದ ವಿವರ ಕೇಳಿದ ಹೈಕೋರ್ಟ್

Last Updated 21 ಏಪ್ರಿಲ್ 2020, 15:09 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ’ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತಾಪತ್ರಯಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳಚಾರವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ‌ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರ ಪ್ರಸ್ತಾಪಿಸಿದರು.

‘ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಸಮಾರಂಭದಲ್ಲಿ ಅಂತರವನ್ನು ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸಿ’ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.

ಅಂತೆಯೇ, ‘ಕೆಲವೆಡೆ ಜನ‌ಪ್ರತಿನಿಧಿಗಳು ಜನರಿಗೆ ಆಹಾರ, ದಿನಸಿ ಹಾಗೂ ಅಗತ್ಯ ವಸ್ತುಗಳ ವಿತರಣೆ ವೇಳೆ ಅಂತರ ಕಾಯ್ದುಕೊಂಡಿಲ್ಲ’ಎಂದೂ ಓಕಾ ಅವರುಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT